Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:1 - ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:1
22 ತಿಳಿವುಗಳ ಹೋಲಿಕೆ  

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.


ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು