Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:18 - ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:18
16 ತಿಳಿವುಗಳ ಹೋಲಿಕೆ  

ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ನಿಮ್ಮ ಪೂರ್ವಜರು, ಜುದೇಯದ ಅರಸರು, ಅವರ ಪತ್ನಿಯರು, ನೀವು, ನಿಮ್ಮ ಹೆಂಡತಿಯರು, ಇವರೆಲ್ಲರು ಜುದೇಯದ ನಾಡಿನಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ನಡೆಸಿದ ದುರಾಚಾರಗಳನ್ನು ನೀವು ಮರೆತುಬಿಟ್ಟಿರೋ?


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.


ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು