Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲ ಮಿಶ್ರಜಾತಿ ಅವರನ್ನು ತಮ್ಮ ಮಧ್ಯೆಯಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ವಿುಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:3
12 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು