Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:14 - ಕನ್ನಡ ಸತ್ಯವೇದವು C.L. Bible (BSI)

14 ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:14
34 ತಿಳಿವುಗಳ ಹೋಲಿಕೆ  

ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.


ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು