Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:9 - ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:9
21 ತಿಳಿವುಗಳ ಹೋಲಿಕೆ  

ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.


ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.


ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು