Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:1
10 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.


ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.


ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಹಳೆಯದು ಎಂಬ ಬಾಗಿಲನ್ನು ದುರಸ್ತಿಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.


ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.


ಇದಕ್ಕಿಂತ ಮೊದಲು ಯಾಜಕ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಕಗೊಂಡಿದ್ದನು. ಇವನು ಟೋಬೀಯನ ಬೀಗನಾಗಿದ್ದುದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು