Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:1 - ಕನ್ನಡ ಸತ್ಯವೇದವು C.L. Bible (BSI)

1 ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:1
12 ತಿಳಿವುಗಳ ಹೋಲಿಕೆ  

ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.


ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕಾಗಿ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು