Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:5 - ಕನ್ನಡ ಸತ್ಯವೇದವು C.L. Bible (BSI)

5 ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಸಾಧಾರಣಜನರನ್ನೂ ಖಾನೇಷುಮಾರಿಗೋಸ್ಕರ ಕೂಡಿಸಿದೆನು. ಆಗ [ಯೆರೂಸಲೇವಿುಗೆ] ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:5
15 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ಮೋಸಹೋಗಬೇಡಿ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.


“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕರ ವೃತ್ತಿಯಿಂದ ನಿರಾಕೃತರಾದರು.


ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು