Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:1 - ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:1
25 ತಿಳಿವುಗಳ ಹೋಲಿಕೆ  

ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.


ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.


ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.


ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.


ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.


ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;


ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು