Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:10 - ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:10
32 ತಿಳಿವುಗಳ ಹೋಲಿಕೆ  

ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.


ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.


ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿ, ಸಂತೋಷ ಆತನ ಗರ್ಭಗುಡಿಯಲಿ II


ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು