Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:12 - ಕನ್ನಡ ಸತ್ಯವೇದವು C.L. Bible (BSI)

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:12
25 ತಿಳಿವುಗಳ ಹೋಲಿಕೆ  

ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.


ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಸಿರಿಸಂಪತ್ತಿಗಿಂತ ಮಿಗಿಲಾಗಿ I ಆನಂದಿಪೆ ನಿನ್ನ ಮಾರ್ಗಿಯಾಗಿ II


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು.


ಮರುದಿನ ಎಲ್ಲ ಇಸ್ರಯೇಲ್ ಗೋತ್ರಪ್ರಧಾನರು, ಯಾಜಕರು ಹಾಗು ಲೇವಿಯರು ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದರು.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು