Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:16 - ಕನ್ನಡ ಸತ್ಯವೇದವು C.L. Bible (BSI)

16 ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:16
12 ತಿಳಿವುಗಳ ಹೋಲಿಕೆ  

ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.


ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.


ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಆರಿಸಿಕೊಂಡ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು