Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:18 - ಕನ್ನಡ ಸತ್ಯವೇದವು C.L. Bible (BSI)

18 ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:18
7 ತಿಳಿವುಗಳ ಹೋಲಿಕೆ  

‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು