Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:15 - ಕನ್ನಡ ಸತ್ಯವೇದವು C.L. Bible (BSI)

15 ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:15
23 ತಿಳಿವುಗಳ ಹೋಲಿಕೆ  

ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.


ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು