Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:29 - ಕನ್ನಡ ಸತ್ಯವೇದವು C.L. Bible (BSI)

29 ‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:29
34 ತಿಳಿವುಗಳ ಹೋಲಿಕೆ  

ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.


ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.


ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”


ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು