Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:9 - ಕನ್ನಡ ಸತ್ಯವೇದವು C.L. Bible (BSI)

9 ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:9
8 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು