Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:16 - ಕನ್ನಡ ಸತ್ಯವೇದವು C.L. Bible (BSI)

16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:16
26 ತಿಳಿವುಗಳ ಹೋಲಿಕೆ  

ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.


ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.


ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು.


ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1


ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು.


ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,


ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು