Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:4 - ಕನ್ನಡ ಸತ್ಯವೇದವು C.L. Bible (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:4
8 ತಿಳಿವುಗಳ ಹೋಲಿಕೆ  

ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು.


ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.


ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.


(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).


ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.


ಯಾಯೀರನು ಸತ್ತು ಕಾಮೋನಿನಲ್ಲಿ ಸಮಾಧಿಯಾದನು.


ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು