Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವನಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:7
15 ತಿಳಿವುಗಳ ಹೋಲಿಕೆ  

ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು