Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:9 - ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:9
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.


ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.


ಇಸ್ರಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪ ದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು