Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:2 - ಕನ್ನಡ ಸತ್ಯವೇದವು C.L. Bible (BSI)

2 ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಗಿಲ್ಯಾದನಿಗೆ ಹೆಂಡತಿಯಲ್ಲಿಯೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ - ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:2
10 ತಿಳಿವುಗಳ ಹೋಲಿಕೆ  

ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ.


ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.


ಮಗನೇ, ಪರಸ್ತ್ರೀಯಲ್ಲಿ ಭ್ರಮೆ ಏಕೆ? ಅನ್ಯಳ ಎದೆ ತಬ್ಬಿಕೊಳ್ಳುವುದೇಕೆ?


ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.


ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?


ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.


ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.


ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು