Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:23 - ಕನ್ನಡ ಸತ್ಯವೇದವು C.L. Bible (BSI)

23 “ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್‍ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:23
5 ತಿಳಿವುಗಳ ಹೋಲಿಕೆ  

ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ಇದಲ್ಲದೆ, ಕತ್ತಿ - ಬಿಲ್ಲುಗಳಿಂದ ನಾನು ಅಮೋರಿಯರ ವಶದಿಂದ ಪಡೆದ ಬೆಟ್ಟದ ತಪ್ಪಲನ್ನು, ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ, ನಿನಗೆ ಕೊಟ್ಟಿದ್ದೇನೆ,” ಎಂದು ಹೇಳಿದನು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು