Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:26 - ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:26
21 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.


ಅಬೀಮೆಲೆಕನು ಇಸ್ರಯೇಲರನ್ನು ಮೂರುವರ್ಷ ಆಳಿದನಂತರ


ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು;


ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,


ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;


ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,


ಅರೋಯೇರಿನವರೇ, ದಾರಿ ಮಗ್ಗುಲಲ್ಲಿ ನಿಂತು ನೋಡಿ ! ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತೆಂದು ವಿಚಾರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು