Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:29
14 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.


ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.


ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.


ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ


ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು