Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:3 - ಕನ್ನಡ ಸತ್ಯವೇದವು C.L. Bible (BSI)

3 ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:3
9 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು