Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:32 - ಕನ್ನಡ ಸತ್ಯವೇದವು C.L. Bible (BSI)

32 ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಯೆಫ್ತಾಹನು ಅಮ್ಮೋನಿಯರ ದೇಶಕ್ಕೆ ಹೋಗಿ ಯುದ್ಧಮಾಡಿದನು. ಅವರನ್ನು ಸೋಲಿಸಲು ಯೆಹೋವನು ಯೆಫ್ತಾಹನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:32
6 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.


ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.


ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.


ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು