Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:36 - ಕನ್ನಡ ಸತ್ಯವೇದವು C.L. Bible (BSI)

36 ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:36
10 ತಿಳಿವುಗಳ ಹೋಲಿಕೆ  

ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.


ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು