Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:39 - ಕನ್ನಡ ಸತ್ಯವೇದವು C.L. Bible (BSI)

39 ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:39
12 ತಿಳಿವುಗಳ ಹೋಲಿಕೆ  

ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.


ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.


ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು.


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು