Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:1 - ಕನ್ನಡ ಸತ್ಯವೇದವು C.L. Bible (BSI)

1 ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:1
14 ತಿಳಿವುಗಳ ಹೋಲಿಕೆ  

ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.


ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು