Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:6 - ಕನ್ನಡ ಸತ್ಯವೇದವು C.L. Bible (BSI)

6 ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:6
12 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ಸ್ವಲ್ಪ ಹೊತ್ತಾದ ಮೇಲೆ ಅಲ್ಲಿದ್ದವರು ಪೇತ್ರನಿಗೆ, “ಖಂಡಿತವಾಗಿ ನೀನು ಅವರಲ್ಲಿ ಒಬ್ಬನು. ಏಕೆಂದರೆ, ನೀನೂ ಗಲಿಲೇಯದವನೇ,” ಎಂದರು.


ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II


ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II


ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.


ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು