Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:8 - ಕನ್ನಡ ಸತ್ಯವೇದವು C.L. Bible (BSI)

8 ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:8
8 ತಿಳಿವುಗಳ ಹೋಲಿಕೆ  

ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ಆ ಮಹಿಳೆ ಹೊಲದಲ್ಲಿ ಕುಳಿತಿರುವಾಗ ದೇವದೂತನು ತಿರುಗಿ ಬಂದನು. ಆಕೆಯ ಗಂಡ ಮಾನೋಹನು ಅಲ್ಲಿರಲಿಲ್ಲ.


ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು