Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:17 - ಕನ್ನಡ ಸತ್ಯವೇದವು C.L. Bible (BSI)

17 ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಂಸೋನನ ಹೆಂಡತಿಯು ಔತಣದ ಏಳು ದಿನಗಳೆಲ್ಲಾ ಅಳುತ್ತಿದ್ದಳು. ಆದ್ದರಿಂದ ಏಳನೆಯ ದಿನ ಅವನು ಒಗಟಿನ ಅರ್ಥವನ್ನು ಅವಳಿಗೆ ಹೇಳಿದನು. ಅವಳು ಪೀಡಿಸಿದ್ದರಿಂದ ಅವನು ಹೇಳಿದನು. ಆಗ ಅವಳು ತನ್ನ ಜನರಲ್ಲಿಗೆ ಹೋಗಿ ಆ ಒಗಟಿನ ಅರ್ಥವನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:17
13 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.


ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.


ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.


ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ಆಗ ದೆಲೀಲಳು ಸಂಸೋನನಿಗೆ, “ನೀವು ತಿರುಗಿ ನನ್ನನ್ನು ವಂಚಿಸಿದಿರಿ, ಸುಳ್ಳಾಡಿದಿರಿ; ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸಿ,” ಎನ್ನಲು ಅವನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಸಾಕು,” ಎಂದು ಹೇಳಿದನು.


ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಆಕೆ ಸಂಸೋನನ ಮುಂದೆ ಅಳುತ್ತಾ, “ನೀವು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀರಷ್ಟೇ; ನನ್ನ ಜನರಿಗೆ ಒಗಟನ್ನು ಹೇಳಿದ್ದೀರಿ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ಪೀಡಿಸಿದಳು. ಅವನು ಆಕೆಗೆ, “ಇದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರಕೊಟ್ಟನು.


ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು