Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:19
9 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.


ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು