Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:14 - ಕನ್ನಡ ಸತ್ಯವೇದವು C.L. Bible (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:14
22 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.


ಸುತ್ತಮುತ್ತಲು ಮುತ್ತಿಕೊಂಡಿದ್ದರು ಎನ್ನನು I ಪ್ರಭುವಿನ ನಾಮಬಲದಲಿ ಸಂಹರಿಸಿದೆನವರನು II


ನಾನು ಒಡನೆ ಬೆನ್ನಟ್ಟಿ ಹೋಗುತ್ತಿದ್ದೆ; ಆ ಕಾಡುಮೃಗವನ್ನು ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆ. ಅದು ಹಿಂದಿರುಗಿ ನನ್ನ ಮೇಲೆ ಬಿದ್ದಾಗ ಅದನ್ನು ಗಡ್ಡ ಹಿಡಿದು, ಬಡಿದು, ಕೊಂದುಹಾಕುತ್ತಿದ್ದೆ.


ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.


ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.


ಜನರು ಸಂಸೋನನನ್ನು ನೋಡಿ : ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.


ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿಸಿ, “ಸಂಸೋನರೇ, ನಿಮ್ಮ ಮೇಲೆ ಫಿಲಿಷ್ಟಿಯರು ಬಂದರು,” ಎಂದು ಕೂಗಿದಳು. ಅವನು ಬೆಂಕಿ ತಗಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆಹೋಯಿತು.


‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.


ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.


ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.


ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯ ಮಾಡಿಕೊಂಡು ಯುದ್ಧಕ್ಕೆ ನಿಂತರು.


ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು