Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:15 - ಕನ್ನಡ ಸತ್ಯವೇದವು C.L. Bible (BSI)

15 ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:15
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.


ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಅಲ್ಲದೆ, ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪುಮಾಡಿ ಪ್ರತಿ ಒಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು ಅವರಿಗೆ,


ಆದರೆ ಹೆಬೆರನ ಹೆಂಡತಿ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


“ಕತ್ತೆಯ ದವಡೆ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆ; ಕತ್ತೆಯ ದವಡೆ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆ” ಎಂದು ಹೇಳಿ


ತನ್ನ ಕೈಯಲ್ಲಿದ್ದ ಎಲುಬನ್ನು ಬಿಸಾಡಿದನು. ಆ ಸ್ಥಳಕ್ಕೆ ‘ರಾಮತ್ ಲೆಹೀ" ಎಂದು ಹೆಸರಾಯಿತು.


ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ.


ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು