Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:21 - ಕನ್ನಡ ಸತ್ಯವೇದವು C.L. Bible (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:21
15 ತಿಳಿವುಗಳ ಹೋಲಿಕೆ  

ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.


ಒಂದೇ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.


ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.


ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು