Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:5 - ಕನ್ನಡ ಸತ್ಯವೇದವು C.L. Bible (BSI)

5 ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:5
17 ತಿಳಿವುಗಳ ಹೋಲಿಕೆ  

ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.


ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.


ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.


ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು