Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:17 - ಕನ್ನಡ ಸತ್ಯವೇದವು C.L. Bible (BSI)

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:17
19 ತಿಳಿವುಗಳ ಹೋಲಿಕೆ  

ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ?


ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.


ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.


ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.


ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರು ನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.


ಅವುಗಳನ್ನು ಅವರು ಮೀಕನ ಮನೆಯನ್ನು ಹೊಕ್ಕು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ, “ನೀವು ಮಾಡಿದ್ದೇನು?” ಎಂದನು.


ಅನಂತರ ಆಕೆ ಗೊಂಬೆಯೊಂದನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಮಾಡಿದ ತಲೆದಿಂಬನ್ನು ಇಟ್ಟು ಕಂಬಳಿಯನ್ನು ಹೊದಿಸಿದಳು.


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು