Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:29 - ಕನ್ನಡ ಸತ್ಯವೇದವು C.L. Bible (BSI)

29 ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದವನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:29
11 ತಿಳಿವುಗಳ ಹೋಲಿಕೆ  

ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು