Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:31 - ಕನ್ನಡ ಸತ್ಯವೇದವು C.L. Bible (BSI)

31 ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರ ಮನೆ ಶೀಲೋವಿನಲ್ಲಿ ಇರುವ ಮಟ್ಟಿಗೂ, ಅವರು ಮೀಕನು ಮಾಡಿದ ವಿಗ್ರಹವನ್ನು ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:31
8 ತಿಳಿವುಗಳ ಹೋಲಿಕೆ  

ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.


ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.


ನಾನು ನನ್ನ ನಾಮವನ್ನು ಮೊದಲು ಪ್ರತಿಷ್ಠಾಪಿಸಿದ ‘ಶಿಲೊ’ ಎಂಬ ಸ್ಥಾನಕ್ಕೆ ಹೋಗಿ ನೋಡಿ. ನನ್ನ ಜನ ಇಸ್ರಯೇಲರ ಅಧರ್ಮದ ನಿಮಿತ್ತ ಆ ಸ್ಥಳಕ್ಕೆ ತಂದ ಗತಿಯನ್ನು ಹೋಗಿ ನೋಡಿ.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.


ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು