Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:18 - ಕನ್ನಡ ಸತ್ಯವೇದವು C.L. Bible (BSI)

18 ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಇವನಿಗೆ - ನಾವು ಯೆಹೂದದ ಬೇತ್ಲೆಹೇವಿುನಿಂದ ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೇತ್ಲೆಹೇವಿುಗೆ ಹೋಗಿದ್ದೆನು; ಈಗ ತಿರಿಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರಕೊಂಡು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಇವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮ್ ಬೆಟ್ಟದ ಕಡೆಯಲ್ಲಿ ಹಾದು ಹೋಗುತ್ತೇವೆ. ನಾನು ಅಲ್ಲಿಯವನು. ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು. ಈಗ ಯೆಹೋವ ದೇವರ ಮನೆಗೆ ಹೋಗುತ್ತೇನೆ. ಆದರೆ ನಮ್ಮನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:18
12 ತಿಳಿವುಗಳ ಹೋಲಿಕೆ  

ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.


ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.


ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು.


ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು