ನ್ಯಾಯಸ್ಥಾಪಕರು 2:10 - ಕನ್ನಡ ಸತ್ಯವೇದವು C.L. Bible (BSI)10 ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. ಅಧ್ಯಾಯವನ್ನು ನೋಡಿ |