Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:2 - ಕನ್ನಡ ಸತ್ಯವೇದವು C.L. Bible (BSI)

2 ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:2
29 ತಿಳಿವುಗಳ ಹೋಲಿಕೆ  

ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.


ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು?


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು