Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:3 - ಕನ್ನಡ ಸತ್ಯವೇದವು C.L. Bible (BSI)

3 ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಹೀಗೆ ಮಾಡುವದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸಿ ಬಿಡುವದಿಲ್ಲ; ಅವರು ನಿಮ್ಮನ್ನು ಉಪದ್ರವಪಡಿಸುವರು; ಅವರ ದೇವತೆಗಳು ನಿಮಗೆ ಉರುಲಾಗುವವು ಎಂದು ಮೊದಲೇ ಹೇಳಿದೆನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:3
11 ತಿಳಿವುಗಳ ಹೋಲಿಕೆ  

ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.


ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ I ಉರುಲಾದವು ಆ ವಿಗ್ರಹಗಳೆ ಅವರಿಗೆ II


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.


ಆದ್ದರಿಂದ ಯೆಹೋಶುವನು ಸಾಯುವ ಮೊದಲು ಹೊರಗಟ್ಟದೆ ಬಿಟ್ಟ ಜನಾಂಗಗಳಲ್ಲಿ ಒಂದನ್ನಾದರೂ ನಾನು ಹೊರಡಿಸುವುದಿಲ್ಲ.


ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.


ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.


ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.


ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು