Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:1 - ಕನ್ನಡ ಸತ್ಯವೇದವು C.L. Bible (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:1
35 ತಿಳಿವುಗಳ ಹೋಲಿಕೆ  

ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.


ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.


ಸಮುವೇಲನು ಇಸ್ರಯೇಲರನ್ನು ಮಿಚ್ಪೆಗೆ ಕರೆಯಿಸಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿಸಿದನು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು.


ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.


ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.


ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.


ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.


ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರುದ್ಧವಾಗಿ ಕೂಡಿಕೊಂಡರು.


ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು.


ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌


ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.


ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ ಬೇರ್ಷೆಬವೂ ಅದರ ಗ್ರಾಮಗಳೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು