Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:2 - ಕನ್ನಡ ಸತ್ಯವೇದವು C.L. Bible (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ಎಲ್ಲ ಕುಲಾಧಿಪತಿಗಳು ಅಲ್ಲಿದ್ದರು. ಅವರು ದೈವಭಕ್ತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಯುದ್ಧ ಸನ್ನದ್ಧರಾದ ನಾಲ್ಕು ಲಕ್ಷ ಜನರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:2
9 ತಿಳಿವುಗಳ ಹೋಲಿಕೆ  

ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.


ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು.


ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.


ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.


(ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.


ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು.


ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು