ನ್ಯಾಯಸ್ಥಾಪಕರು 20:26 - ಕನ್ನಡ ಸತ್ಯವೇದವು C.L. Bible (BSI)26 ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿ |