Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:41 - ಕನ್ನಡ ಸತ್ಯವೇದವು C.L. Bible (BSI)

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:41
14 ತಿಳಿವುಗಳ ಹೋಲಿಕೆ  

ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.


ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.


ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು