Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:10
9 ತಿಳಿವುಗಳ ಹೋಲಿಕೆ  

ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.


ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು.


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು.


ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು