Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:1 - ಕನ್ನಡ ಸತ್ಯವೇದವು C.L. Bible (BSI)

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ನೋಡದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:1
20 ತಿಳಿವುಗಳ ಹೋಲಿಕೆ  

ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.


ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಆದರೆ ಯೇಸು ಎಲ್ಲರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಅವರ ಈ ನಂಬಿಕೆಗೆ ಮಾರುಹೋಗಲಿಲ್ಲ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ಈ ಕಾರಣ ಸರ್ವೇಶ್ವರಸ್ವಾಮಿ ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು